ಮೂರು ದಿನದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಇತ್ತ ಯಡಿಯೂರಪ್ಪ

ಶನಿವಾರ, 19 ಮೇ 2018 (16:07 IST)
ಬೆಂಗಳೂರು:  ವಿಶ್ವಾಸ ಮತ ಯಾಚನೆ ಬಗ್ಗೆ ಇಡೀ ದೇಶವೇ ಎದುರು ನೋಡುತ್ತಿದ್ದರೆ, ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ವಿಶ್ವಾಸ ಮತಕ್ಕೂ ಮೊದಲೇ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಸ್ತಾವನೆ ಮಂಡಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಬಿಎಸ್ ಯಡಿಯೂರಪ್ಪ ಚಾಟಿ ಬೀಸಿದ್ದಾರೆ. ಹಿಂದಿನ ಸರ್ಕಾರದ ವೈಫಲ್ಯದಿಂದ ಬೇಸತ್ತ ಜನ ನಮಗೆ ಜನಾದೇಶ ಕೊಟ್ಟಿದ್ದರು. ಸದನ ನನ್ನ ನೇತೃತ್ವದ ಸರ್ಕಾರದಲ್ಲಿ ವಿಶ್ವಾಸವಿರಿಸುತ್ತದೆ ಎಂಬ ನಂಬಿಕೆ ನನಗಿದೆ ಎಂದರು.

ಬಳಿಕ ಪ್ರಸ್ತಾವನೆ ಸಲ್ಲಿಸದೇ ನೇರವಾಗಿ ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಬಳಿಕ ಸೀದಾ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಲು ಹೊರಟರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ