ರಾಜ್ಯ ಸಂಪುಟ ವಿಸ್ತರಣೆಗೆ ಪಿತೃಪಕ್ಷದ ಕಾಟ!
ಸೆಪ್ಟೆಂಬರ್ ಮೊದಲ ವಾರದಲ್ಲೇ ಸಂಪುಟ ವಿಸ್ತರಣೆ ನಡೆಸುವುದೆಂದು ಈ ಮೊದಲು ಕಾಂಗ್ರೆಸ್ ಮತ್ತು ಜೆಡಿಎಸ್ ನಿರ್ಧಾರ ಮಾಡಿಕೊಂಡಿದ್ದರು. ಆದರೆ ಇದೀಗ ಜಾರಕಿಹೊಳಿ ಸಹೋದರರ ಬಂಡಾಯದ ನಂತರ ದಿಡೀರ್ ಆಗಿ ಸಂಪುಟ ವಿಸ್ತರಣೆ ಮಾಡಿದರೆ ಬಂಡಾಯ ಬಿಸಿ ಹೆಚ್ಚಾಗಬಹುದು ಎಂಬ ಭಯ ಉಭಯ ಪಕ್ಷಗಳ ಹೈಕಮಾಂಡ್ ಗಿದೆ.
ಹೀಗಾಗಿ ಸಂಪುಟ ವಿಸ್ತರಣೆ ಮುಂದೂಡಲು ನಾಯಕರು ಚಿಂತನೆ ನಡೆಸುತ್ತಿದ್ದಾರೆ. ಆದರೆ ತಡವಾದರೆ ಪಿತೃಪಕ್ಷ ಶುರುವಾಗುತ್ತದೆ. ಪಿತೃಪಕ್ಷದಲ್ಲಿ ಸಂಪುಟ ವಿಸ್ತರಣೆ ಮಾಡಲು ಜೆಡಿಎಸ್ ವರಿಷ್ಠ ದೇವೇಗೌಡರು ಒಪ್ಪಲಾರರು. ಈ ಕಾರಣಕ್ಕೆ ಈಗಲೇ ಸಂಪುಟ ವಿಸ್ತರಣೆ ನಡೆಯಲಿ ಎಂದು ಕೆಲವು ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಇದೀಗ ಹೈಕಮಾಂಡ್ ಗೆ ಹೊಸ ತಲೆನೋವು ಶುರುವಾಗಿದೆ.