ಶೀಘ್ರವೇ ಕ್ಯಾಬಿನೆಟ್ ವಿಸ್ತರಣೆ!

ಮಂಗಳವಾರ, 3 ಮೇ 2022 (13:00 IST)
ಬೆಂಗಳೂರು : 2-3 ದಿನಗಳಲ್ಲಿ ಕ್ಯಾಬಿನೆಟ್ ವಿಸ್ತರಣೆ ನಿಶ್ಚಿತವಾಗಿ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬಂದಿದ್ದಾರೆ. ಆದರೆ ನಾನಿನ್ನು ಅವರನ್ನು ಭೇಟಿ ಮಾಡಿಲ್ಲ.

ಆದರೆ ಕ್ಯಾಬಿನೆಟ್ ವಿಸ್ತರಣೆಯ ಬಗ್ಗೆ ನಿಶ್ಚಿತವಾದ ತೀರ್ಮಾನ ತೆಗೆದುಕೊಂಡೆ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾರೆ ಎಂದುಕೊಂಡಿದ್ದೇನೆ ಎಂದು ಹೇಳಿದರು.

ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ದೆಹಲಿಗೆ ಹೋಗಿ ಮೋದಿ ಅವರ ಜೊತೆ ಚರ್ಚಿಸಿ ತೀರ್ಮಾನ ಮಾಡಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ