ಡಿಕೆಶಿ ಆಪ್ತರ ಮೇಲೆ ಸಿಬಿಐ ದಾಳಿ: ಸಿದ್ದರಾಮಯ್ಯ, ಎಚ್ ಡಿಕೆ ಹೇಳಿದ್ದೇನು?
ಡಿಕೆಶಿ ಮತ್ತು ಆಪ್ತರು ಅಕ್ರಮವಾಗಿ ಹಳೇ ನೋಟು ಬದಲಾವಣೆ ಮಾಡಿಕೊಂಡಿದ್ದಾರೆಂಬ ಅನುಮಾನದ ಮೇಲೆ ಇವರ ಮೇಲೆ ದಾಳಿ ನಡೆಸಲಾಗುತ್ತಿದೆ. ಆದರೆ ಕಾಂಗ್ರೆಸ್ ಇದು ಸೇಡಿನ ರಾಜಕೀಯ ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇದು ಬಿಜೆಪಿಯ ಸೇಡಿನ ರಾಜಕೀಯ. ಬೇಕೆಂದೇ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನೊಂದೆಡೆ ಸಿಎಂ ಎಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಕೇಂದ್ರದ ತನಿಖಾ ಬ್ಯೂರೋಗಳು ನಡೆಸುತ್ತಿರುವ ದಾಳಿ. ನಮ್ಮ ಪಾತ್ರವಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.