ಸಿಎಂ ಮಮತಾ ಬ್ಯಾನರ್ಜಿ ನಡೆದುಕೊಂಡೇ ಬರುವಂತೆ ಮಾಡಿದ ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ಕ್ಲಾಸ್!

ಗುರುವಾರ, 24 ಮೇ 2018 (10:46 IST)
ಬೆಂಗಳೂರು: ನಿನ್ನೆ ತಮ್ಮ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಂದಿದ್ದ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸೂಕ್ತ ಭದ್ರತೆ ಒದಗಿಸದ ಪೊಲೀಸರ ವಿರುದ್ಧ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವಾಗ ಟ್ರಾಫಿಕ್ ಜ್ಯಾಮ್ ನಲ್ಲಿ ಸಿಲುಕಿಕೊಂಡ ಸಿಎಂ ಮಮತಾ ಚಾಲುಕ್ಯ ವೃತ್ತದಿಂದ ವಿಧಾನಸೌಧದವರೆಗೆ ಭದ್ರತೆಯಿಲ್ಲದೇ ನಡೆದುಕೊಂಡೇ ಬಂದಿದ್ದರು.

ಈ ಬಗ್ಗೆ ಬಳಿಕ ಮಮತಾ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ದೇವೇಗೌಡರ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಸಿಟ್ಟಿಗೆದ್ದ ಸಿಎಂ ಕುಮಾರಸ್ವಾಮಿ ಡಿಜಿ ಮತ್ತು ಐಜಿಪಿ ಬಳಿ ಭದ್ರತಾ ಲೋಪದ ವಿವರಣೆ ಕೇಳಿದ್ದಾರೆ. ಅಷ್ಟೇ ಅಲ್ಲದೆ, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಸ್ವತಃ ಸಿಎಂ ಕುಮಾರಸ್ವಾಮಿ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ