ನಿನ್ನೆಯಿಡೀ ದೆಹಲಿಯಲ್ಲಿ ಬ್ಯುಸಿಯಾಗಿದ್ದ ಸಿಎಂ ಕುಮಾರಸ್ವಾಮಿ!

ಮಂಗಳವಾರ, 29 ಮೇ 2018 (09:11 IST)
ನವದೆಹಲಿ: ರಾಷ್ಟ್ರ ರಾಜಧಾನಿಗೆ ತೆರಳಿ ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ ಮೈಸೂರು ಪೇಟ, ಹಾರ ಹಾಕಿ ಸನ್ಮಾನಿಸಿದ್ದಾರೆ. ಅಷ್ಟೇ ಅಲ್ಲದೆ, ಕಾಂಗ್ರೆಸ್ ನಾಯಕರನ್ನೂ ಭೇಟಿಯಾಗಿದ್ದಾರೆ.

ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ತೆರಳಿ ಸಿಎಂ ಕುಮಾರಸ್ವಾಮಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮನೆಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆಯನ್ನೂ ನಡೆಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಾಗದೇ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗದೇ ಇಕ್ಕಟ್ಟಿಗೆ ಸಿಲುಕಿರುವ ಕುಮಾರಸ್ವಾಮಿ ನಿನ್ನೆಯಿಡೀ ದೆಹಲಿಯಲ್ಲಿ ಸರಣಿ ಸಭೆಗಳಲ್ಲಿ ಬ್ಯುಸಿಯಾಗಿದ್ದರು. ಕುಮಾರಸ್ವಾಮಿ ಜತೆಗೆ ಸಹೋದರ, ಶಾಸಕ ಎಚ್ ಡಿ ರೇವಣ್ಣ ಕೂಡಾ ಇದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ