ಬಸ್ ದರ ಹೆಚ್ಚಳ ಮಾಡಿ ಕ್ಷಣದಲ್ಲೇ ಸಿಎಂ ಕುಮಾರಸ್ವಾಮಿ ಆದೇಶ ಹಿಂಪಡೆದಿದ್ದರ ಕಾರಣವೇನು ಗೊತ್ತಾ?!
ತೈಲ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ನಷ್ಟ ಸರಿದೂಗಿಲು ಬಸ್ ದರ ಹೆಚ್ಚಳ ಅನಿವಾರ್ಯ ಎಂದು ಸಾರಿಗೆ ಸಚಿವ ತಮ್ಮಣ್ಣ ಸ್ಪಷ್ಟನೆ ನೀಡಿದ್ದರು. ಆದರೆ ನಿನ್ನೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ದರ ಕಡಿತಗೊಳಿಸಿ ಪ್ರತೀ ಲೀ.ಗೆ ತೈಲ ಬೆಲೆ 2 ರೂ. ಗಳಷ್ಟು ರಾಜ್ಯ ಸರ್ಕಾರ ಇಳಿಕೆ ಮಾಡಿತ್ತು.
ಇದರ ಬೆನ್ನಲ್ಲೇ ದರ ಏರಿಕೆ ಸದ್ಯಕ್ಕೆ ಬೇಡ. ಆದೇಶ ತಡೆಹಿಡಿಯಿರಿ ಎಂದು ಸಿಎಂ ಎಚ್ ಡಿಕೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈಗ ಪೆಟ್ರೋಲ್ ದರ ಇಳಿಕೆ ಮಾಡಿಯೂ ಬಸ್ ದರ ಹೆಚ್ಚಳ ಮಾಡಿದರೆ ವಿಪಕ್ಷ ಬಿಜೆಪಿ ಇದನ್ನೇ ಟೀಕಾಸ್ತ್ರವಾಗಿ ಬಳಸಬಹುದು ಎಂಬ ಕಾರಣಕ್ಕೆ ಸಿಎಂ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ.