ಇಂದು ದೆಹಲಿಯಲ್ಲಿ ಸಿಎಂ ಕುಮಾರಸ್ವಾಮಿ ಮಹತ್ವದ ಸಭೆ

ಬುಧವಾರ, 18 ಜುಲೈ 2018 (09:17 IST)
ನವದೆಹಲಿ: ಕಾವೇರಿ ನದಿ ಪ್ರಾಧಿಕಾರ ರಚನೆ ಸಂಬಂಧ ಇಂದು ದೆಹಲಿಯಲ್ಲಿ ಸಿಎಂ ಕುಮಾರಸ್ವಾಮಿ ರಾಜ್ಯದ ಸಂಸದರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
 

ದೆಹಲಿಯ ಕರ್ನಾಟಕ ಭವನದಲ್ಲಿ ನಡೆಯಲಿರುವ ಸಭೆಗೆ ರಾಜ್ಯದ ಸಂಸದರು ಸೇರಿದಂತೆ ರಾಜ್ಯ ಪ್ರತಿನಿಧಿಸುವ ಎಲ್ಲಾ ನಾಯಕರು ಆಗಮಿಸಲಿದ್ದಾರೆ. ಸಂಸತ್ತು ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಹಿತ ಕಾಪಾಡುವಂತೆ ಸಂಸದರಿಗೆ ಸಿಎಂ ಮನವಿ ಮಾಡಲಿದ್ದಾರೆ.

ಕಾವೇರಿ ನದಿ ಪ್ರಾಧಿಕಾರ ರಚನೆ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಜತೆಗೆ ಕೇಂದ್ರ ರಾಜ್ಯಕ್ಕೆ ಮಂಜೂರು ಮಾಡಿರುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲು ಒತ್ತಡ ಹೇರಲು ಸಂಸದರಿಗೆ ಸಿಎಂ ಒತ್ತಾಯ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ