ಸಿದ್ದರಾಮಯ್ಯಗೆ ಬಾದಾಮಿ ಗೆಲುವಿನ ಸಮಾಧಾನ

ಮಂಗಳವಾರ, 15 ಮೇ 2018 (12:26 IST)
ಬೆಂಗಳೂರು: ಮುಖ್ಯಮಂತ್ರಿಯಾಗಿದ್ದುಕೊಂಡು ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಗೆಲುವು ಸಾಧಿಸಲಾಗದ ಸಿದ್ದರಾಮಯ್ಯ ಬಾದಾಮಿಯಲ್ಲಿ ಸಿಹಿ ಉಂಡಿದ್ದಾರೆ.

ಬಾದಾಮಿಯಲ್ಲಿ ಬಿಜೆಪಿಯ ಬಿ ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಕೊನೆಗೂ ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸೋತ ಮೇಲೆ ಬಾದಾಮಿಯಲ್ಲೂ ಹಿನ್ನಡೆ ಅನುಭವಿಸಿ ಕೊಂಚ ಆತಂಕಕ್ಕೊಳಗಾಗಿದ್ದ ಸಿದ್ದರಾಮಯ್ಯ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಇಲ್ಲಿ ಸಿದ್ದರಾಮಯ್ಯ ಎದುರು ಸೋತ ಬಿ ಶ್ರೀರಾಮುಲು ಮೊಳಕಾಲ್ಮೂರಿನಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಸರ್ಕಾರದ ಪವರ್ ಫುಲ್ ಮಿನಿಷ್ಟರ್ ಡಿಕೆ ಶಿವಕುಮಾರ್ ಗೆ ಕನಕಪುರದಲ್ಲಿ ಗೆಲುವು ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ