ಬಿಜೆಪಿ ಆಡಳಿತ ಕೊನೆಗಾಣಿಸಬೇಕೆಂದು ಶಿವನಿಗೆ ಪತ್ರ ಬರೆದ ಕಾಂಗ್ರೆಸ್ ನ ಮುಖಂಡ !

ಶನಿವಾರ, 14 ಜುಲೈ 2018 (14:03 IST)
ಭೋಪಾಲ್ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಆಡಳಿತ ಕೊನೆಗಾಣಿಸಬೇಕೆಂದು ಕಾಂಗ್ರೆಸ್ ಮುಖಂಡರೊಬ್ಬರು ಶಿವನಿಗೆ ಪತ್ರ ಬರೆದಿದ್ದಾರೆ.


ಹೌದು. ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರು ದೇವರಾದ ಮಹಾಕಾಳೇಶ್ವರಿಗೆ ಪತ್ರದ ಮೂಲಕ ಮನವಿಯನ್ನು ಮಾಡಿಕೊಂಡಿದ್ದು, 15 ವರ್ಷಗಳಿಂದ ದುರಾಡಳಿತ ನಡೆಸುತ್ತಿರುವ ಕೇಸರಿ ಪಡೆಗೆ ಮಧ್ಯಪ್ರದೇಶದ ಜನರು ಮತ ಹಾಕದಂತೆ ಆಶೀರ್ವಾದ ಮಾಡೆಂದು ಪತ್ರದಲ್ಲಿ ತಿಳಿಸಿದ್ದಾರೆ.


ಮಧ್ಯಪ್ರದೇಶದ ಬಿಜೆಪಿ ಆಡಳಿತಾವಧಿಯಲ್ಲಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ಹುಡುಗಿಯರನ್ನು ಅತ್ಯಾಚಾರ ಮಾಡಲಾಗಿದೆ. ಅಲ್ಲದೇ, ಭ್ರಷ್ಟಾಚಾರ ಹಾಗೂ ನಿರುದ್ಯೋಗ ಹೆಚ್ಚಳವಾಗಿದೆ ಎಂದು ಕಮಲ್ ನಾಥ್ ಆರೋಪಿಸಿ ಶಿವನಿಗೆ ಪತ್ರ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ