ಸಿದ್ದರಾಮಯ್ಯ ಕಟ್ಟಿ ಹಾಕಲು ಕೆಪಿಸಿಸಿಯಲ್ಲಿ ಇಂದು ಪ್ಲ್ಯಾನ್!

ಗುರುವಾರ, 28 ಜೂನ್ 2018 (09:39 IST)
ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಾಯಿಗೆ ಬೀಗ ಹಾಕಿಸಲು ಇಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.

ಡಿಸಿಎಂ ಡಾ ಜಿ ಪರಮೇಶ್ವರ್, ಸಚಿವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಕಾಂಗ್ರೆಸ್ ಸಚಿವರೆಲ್ಲರೂ ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗಳಿಂದಾಗಿ ಸರ್ಕಾರಕ್ಕೆ ಭಂಗವಾದೇ ಇರಲು ಈ ಸಭೆಯಲ್ಲಿ ಯೋಜನೆ ರೂಪಿಸಲಾಗುವುದು ಎನ್ನಲಾಗಿದೆ.

ನಿನ್ನೆ ಧರ್ಮಸ್ಥಳದಲ್ಲಿರುವ ಸಿದ್ದರಾಮಯ್ಯ ಭೇಟಿಗೆ 18 ಜನ ಶಾಸಕರು ತೆರಳಿದ ಮೇಲೆ ಕೆಪಿಸಿಸಿ ಎಚ್ಚೆತ್ತುಕೊಂಡಿದ್ದು, ಸರ್ಕಾರಕ್ಕೆ ಯಾವುದೇ ಪರಿಣಾಮವಾಗದಂತೆ ಮಾಡಲು ಯೋಜನೆ ರೂಪಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ