ರಾಜ್ಯಪಾಲರ ಎದುರು ಕಾಂಗ್ರೆಸ್ ಶಾಸಕರ ಪೆರೇಡ್ ಗೆ ಸಿದ್ಧತೆ

ಬುಧವಾರ, 16 ಮೇ 2018 (10:07 IST)
ಬೆಂಗಳೂರು: ಸದ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಎದುರು ಶಾಸಕರ ಪೆರೇಡ್ ನಡೆಸಲು ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.

ಶಾಸಕಾಂಗ ಪಕ್ಷ ಸಭೆಯಲ್ಲಿ ಜೆಡಿಎಸ್ ಗೆ ಬೆಂಬಲ ಕೋರುವ ಬಗ್ಗೆ ಪತ್ರ ಬರೆದು ನಿರ್ಣಯ ಅಂಗೀಕಾರ ಮಾಡಲಾಯಿತು. ಎಲ್ಲಾ ಶಾಸಕರ ಸಹಿ ಪಡೆದುಕೊಂಡ ನಂತರ ರಾಜ್ಯಪಾಲರ ಎದುರು ಶಾಸಕರ ಪೆರೇಡ್ ಗೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ.

ಇದೇ ವೇಳೆ ಬೇರೆ ಬೇರೆ ಕಡೆಯಿಂದ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲು ಕೆಪಿಸಿಸಿ ವತಿಯಿಂದ ವಿಶೇಷ ವಿಮಾನದ ವ್ಯವಸ್ಥೆಯನ್ನೂ ಮಾಡಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ