ದುರಂತ : ದೋಣಿ ಮುಳುಗಡೆ ಮೃತರ ಸಂಖ್ಯೆ ಏರಿಕೆ!

ಮಂಗಳವಾರ, 1 ಮಾರ್ಚ್ 2022 (12:24 IST)
ರಾಂಚಿ : ಜಾರ್ಖಂಡ್‍ನ ಜಮ್ತಾರಾ ಜಿಲ್ಲೆಯ ಬಳಿಯ ನದಿಯಲ್ಲಿ ಇತ್ತೀಚೆಗಷ್ಟೇ ಪ್ರಯಾಣಿಕ ದೋಣಿ ಮುಳುಗಡೆಗೊಂಡಿದ್ದು,

ಸೋಮವಾರ ಎನ್ಡಿಆರ್ಎಫ್ ತಂಡ ಆರು ಶವಗಳನ್ನು ಹೊರತೆಗೆದಿದ್ದಾರೆ ಮತ್ತು ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಆರು ಮೃತದೇಹಗಳು ಪತ್ತೆಯಾಗಿದ್ದು, ಭಾನುವಾರ ಎಂಟು ಮಂದಿ ಶವ ಪತ್ತೆಯಾಗಿತ್ತು. ಇನ್ನೂ ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ.

ಒಟ್ಟು ಈವರೆಗೂ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಜಮ್ತಾರಾ ಉಪ ಆಯುಕ್ತ ಫೈಜ್ ಅಹ್ಮದ್ ಮುಮ್ತಾಜ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ