ಸಚಿವ ಡಿಕೆ ಶಿವಕುಮಾರ್ ಬಂಧನವಾಗುತ್ತಾ?!

ಗುರುವಾರ, 22 ಮಾರ್ಚ್ 2018 (11:33 IST)
ಬೆಂಗಳೂರು: ಐಟಿ ದಾಳಿ ವೇಳೆ ಸಾಕ್ಷ್ಯ ನಾಶ ಮಾಡಿದ ಆರೋಪಕ್ಕೆ ಸಿಲುಕಿರುವ ಇಂಧನ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಬಂಧನ ಭೀತಿಯಲ್ಲಿದ್ದಾರೆ.

ಹೀಗಾಗಿ ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿರುವ ಡಿಕೆ ಶಿವಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಸಹೋದರ, ಸಂಸದ ಡಿಕೆ ಸುರೇಶ್ ಜತೆ ನ್ಯಾಯಾಲಯಕ್ಕೆ ಹಾಜರಾಗಿರುವ ಡಿಕೆಶಿ ಪಡ ವಕೀಲ ಶೇಷಾಚಲ ವಾದ ಮಂಡಿಸಿದ್ದಾರೆ. ಆದರೆ ಜಾಮೀನು ಅರ್ಜಿಗೆ ಆದಾಯ ತೆರಿಗೆ ಇಲಾಖೆ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದೀಗ ನ್ಯಾಯಮೂರ್ತಿ ಎಂಎಸ್ ಆಳ್ವ  ನೀಡುವ ತೀರ್ಪಿನ ಮೇಲೆ ಗಮನ ಕೇಂದ್ರೀಕೃತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ