ಸಿದ್ದರಾಮಯ್ಯ ಬಳಿಕ ಸಚಿವ ಡಿಕೆಶಿಯಿಂದ ಕಾಂಗ್ರೆಸ್ ನಾಯಕರಿಗೆ ಭೂರಿ ಭೋಜನ
ಇಂದು ಸಚಿವ ಡಿಕೆ ಶಿವಕುಮಾರ್ ತಮ್ಮ ಪಕ್ಷದ ಶಾಸಕರು, ಸಂಸದರಿಗಾಗಿ ಪಂಚತಾರಾ ಹೋಟೆಲ್ ನಲ್ಲಿ ಔತಣ ಕೂಟ ಏರ್ಪಡಿಸಿದ್ದು, ಕಾಂಗ್ರೆಸ್ ನ ಬಹುತೇಕ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಜತೆಗೆ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ನ ಸಚಿವರಿಗೂ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.
ಇಂದು ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಔತಣ ಕೂಟ ನಡೆಯಲಿದೆ. ವಿಶೇಷವೆಂದರೆ ಸಿದ್ದರಾಮಯ್ಯ ಕೂಡಾ ಇಲ್ಲಿಯೇ ಶಾಸಕರಿಗಾಗಿ ಔತಣ ಕೂಟ ಏರ್ಪಡಿಸಿದ್ದರು. ಅಂತೂ ಈ ನಾಯಕರು ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಔತಣ ಕೂಟವನ್ನು ವೇದಿಕೆಯಾಗಿಸುತ್ತಿರುವುದಂತೂ ಸುಳ್ಳಲ್ಲ.