ರಾಮನಗರದಲ್ಲಿ ಮತ್ತೆ ಕಂಪಿಸಿದ ಭೂಮಿ! ಭಯಭೀತರಾದ ಜನತೆ

ಭಾನುವಾರ, 11 ಸೆಪ್ಟಂಬರ್ 2022 (09:42 IST)
ರಾಮನಗರ : ತಾಲೂಕಿನಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಭಾರೀ ಶಬ್ದಕ್ಕೆ ಜನರು ಆತಂಕಗೊಂಡು ತಮ್ಮ ಮನೆಗಳಿಂದ ಹೊರಗಡೆ ಓಡಿದ್ದಾರೆ.

ರಾಮನಗರ ತಾಲೂಕಿನ ಬೆಜ್ಜರಹಳ್ಳಿ ಕಟ್ಟೆಯಲ್ಲಿ ಇಂದು ಸಂಜೆ 5:40 ಹಾಗೂ 7:15ರ ಸುಮಾರಿಗೆ 2 ಬಾರಿ ಭೂಮಿ ಕಂಪಿಸಿರುವಂತೆ ಅನುಭವವಾಗಿದೆ.

ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆ ಭೂಕಂಪವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದು, ಭಯದಿಂದ ಹೆದರಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ ರಿಕ್ಟರ್ ಮಾಪನದಲ್ಲಿ ಯಾವುದೇ ಕಂಪನ ದಾಖಲಾಗಿಲ್ಲ ಎನ್ನಲಾಗಿದೆ.

ಇಂದು ಮುಂಜಾನೆಯೂ 5:30ರ ಸುಮಾರಿಗೆ ರಾಮನಗರ ತಾಲೂಕಿನ ಪಾದರಹಳ್ಳಿ ಬಳಿ ಭೂಮಿ ಕಂಪಿಸಿರುವ ಅನುಭವ ಆಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ