ಐದು ದಿನಗಳ ಕಾಲ ಕೇರಳ ನಿಟ್ಟುಸಿರು
ಚೆಂಗನ್ನೂರು, ಪಟ್ಟಣಂತಿಟ್ಟ, ಆಲುವಾ, ಅಡೂರು ಹೊರತುಪಡಿಸಿ ಉಳಿದ ಕಡೆ ಮಳೆ ಕ್ರಮೇಣ ಕಡಿಮೆಯಾಗುತ್ತಿದ್ದು, ರೆಡ್ ಅಲರ್ಟ್ ಹಿಂಪಡೆಯಲಾಗಿದೆ. ಮುಂದಿನ ಐದು ದಿನಗಳ ಕಾಲ ಮಳೆ ಮತ್ತಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಹಾಗಿದ್ದರೂ ಕಲ್ಲಿಕೋಟೆ, ಕಣ್ಣೂರು, ಇಡುಕ್ಕಿ ಜಿಲ್ಲೆಗಳಲ್ಲಿ ಇನ್ನೂ ಭಾರೀ ಮಳೆ ಸುರಿಯುವ ಅಪಾಯವಿದೆ ಎಂದು ತಿಳಿದುಬಂದಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.