ಸುಪ್ರೀಂಕೋರ್ಟ್ನಲ್ಲಿ ಇಂದು ಮೇಕೆದಾಟು ವಿಚಾರಣೆ
ಪ್ರಾಧಿಕಾರ ಸುಪ್ರೀಂಕೋರ್ಟ್ ಕಾರ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು. ನೀರು ಹಂಚಿಕೆ ಬಗ್ಗೆ ಪರಿಶೀಲನೆ ಮಾಡಬೇಕೇ ಹೊರತು ಅಣೆಕಟ್ಟು ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸುವ ಅಧಿಕಾರ ಇಲ್ಲ. ಹೀಗಾಗಿ, ಸಭೆಯಲ್ಲಿ ಅಣೆಕಟ್ಟು ನಿರ್ಮಾಣದ ಬಗ್ಗೆ ಅಥವಾ ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚೆ ಮಾಡಬಾರದು ಎಂದು ಹೇಳಿದೆ.
ಕಳೆದ 9 ವರ್ಷದಲ್ಲಿ 5 ವರ್ಷ ಕರ್ನಾಟಕ ಸಮರ್ಪಕ ನೀರು ಹರಿಸದೇ ಮೋಸ ಮಾಡಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಕೆಳ ಹಂತದ ರಾಜ್ಯಗಳಿಗೆ ತೊಂದರೆಯಾಗಲಿದೆ ಅಂತ ಅಫಿಡೆವಿಟ್ನಲ್ಲಿ ಉಲ್ಲೇಖಿಸಿದೆ.