ಮೇಕೆದಾಟು ಪಾದಯಾತ್ರೆ: ಕರ್ನಾಟಕ ಸರ್ಕಾರ ನಿರ್ಬಂಧ!

ಬುಧವಾರ, 12 ಜನವರಿ 2022 (17:34 IST)
ಬೆಂಗಳೂರು : ಕಾಂಗ್ರೆಸ್ ಪಾದಯಾತ್ರೆಗೆ ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಸಿ.ಎಸ್. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಪಾದಯಾತ್ರೆಯ ವಾಹನ, ಜನರ ಸಂಚಾರ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ.

ರಾಮನಗರ ಜಿಲ್ಲಾಧಿಕಾರಿ, ಎಸ್ಪಿ ಮೂಲಕ ಪಾದಯಾತ್ರೆಗೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಬೇಕಿರುವ ಹಿನ್ನೆಲೆ, ಮತ್ತೊಂದು ಸೂಚನೆ ನೀಡುವ ಸಲುವಾಗಿ ನಿಷೇಧ ಹೇರಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ