ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ : ವಾಹನಗಳಿಗೆ ನಿಷೇಧ!

ಸೋಮವಾರ, 11 ಜುಲೈ 2022 (07:10 IST)
ಚಿಕ್ಕಮಗಳೂರು : ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತಗಳು ಸಂಭವಿಸಿದೆ.

ಚಂದ್ರದ್ರೋಣ ಪರ್ವತ ಸಾಲಿನ ಕೆಲ ಪ್ರವಾಸಿ ಸ್ಥಳಗಳಿಗೆ ಜಿಲ್ಲಾಡಳಿತ ಕೆಲವೊಂದು ನಿರ್ಬಂಧ ಹೇರಿದೆ.

1,200 ಕೆ.ಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ ಹೇರಲಾಗಿದೆ. ಬೆಳಗ್ಗೆ 6-9 ಹಾಗೂ ಮಧ್ಯಾಹ್ನ 2-4 ಗಂಟೆ ವರೆಗೆ ಮಾತ್ರವೇ ಪ್ರಯಾಣಕ್ಕೆ ಅವಕಾಶವಿರುತ್ತದೆ. ತಲಾ 150 ವಾಹನಗಳಂತೆ 300 ವಾಹನಗಳಿಗೆ ಮಾತ್ರವೇ ಅವಕಾಶವಿರುತ್ತದೆ. 

ಮುಳ್ಳಯ್ಯನಗಿರಿ, ದತ್ತಪೀಠ, ಝರಿ ಪಾಲ್ಸ್, ಮಾಣಿಕ್ಯಧಾರ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವವರು ಅಧಿಕೃತ ಹೋಂ ಸ್ಟೇ, ರೆಸಾರ್ಟ್ಗಳನ್ನು ಬುಕ್ಕಿಂಗ್ ಮಾಡಿದ್ದರೆ ಮಾತ್ರವೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಗಿರಿ ಭಾಗದ ಸ್ಥಳೀಯರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೆಶ್ ಆದೇಶಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ