ಸಚಿವ ಸ್ಥಾನ ಕೊಡದಿದ್ದರೆ ಬೇಡ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನಾದರೂ ಕೊಡಿ!

ಭಾನುವಾರ, 17 ಜೂನ್ 2018 (09:54 IST)
ಬೆಂಗಳೂರು: ಸಚಿವ ಸ್ಥಾನ ಸಿಗದೇ ನಿರಾಶೆಗೊಂಡಿರುವ ಕಾಂಗ್ರೆಸ್ ಶಾಸಕರು ಇದೀಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಹುದ್ದೆಗಾಗಿ ಲಾಬಿ ನಡೆಸುತ್ತಿದ್ದಾರೆ.

ಸಚಿವ ಸ್ಥಾನ ಸಿಗದ ಶಾಸಕ ಎಚ್ ಕೆ ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡುವಂತೆ ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಸಚಿವ ಸ್ಥಾನ ಸಿಗದೇ ಇದ್ದರೆ ಬೇಡ ಪಕ್ಷದ ನಾಯಕತ್ವವಾದರೂ ನೀಡಿ ಎಂದು ಒತ್ತಾಯ ಕೇಳಿಬರುತ್ತಿದೆ.

ಇನ್ನು ಕೆಲವು ಪ್ರಮುಖ ಶಾಸಕರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಹೈಕಮಾಂಡ್ ಮುಂದೆ ಲಾಬಿ ನಡೆಸುತ್ತಿದ್ದಾರೆ. ಅಂತೂ ಕಾಂಗ್ರೆಸ್ ನಾಯಕರ ಈ ಅಧಿಕಾರಕ್ಕಾಗಿನ ಮೇಲಾಟ ನೋಡಿ ಬಿಜೆಪಿ ಒಳಗೊಳಗೇ ಖುಷಿಪಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ