ನವದೆಹಲಿ : 2022-23ನೇ ಸಾಲಿನ ಕೇಂದ್ರ ಬಜೆಟ್ಗೆ ಕ್ಷಣಗಣನೆ ಶುರುವಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 4ನೇ ಬಜೆಟ್ ಮಂಡಿಸಲಿದ್ದಾರೆ.
* ದೀರ್ಘಕಾಲಿಕ ಯೋಜನೆಗಳಿಗೆ ಹೆಚ್ಚು ಆದ್ಯತೆ
* ಗ್ರಾಮೀಣ ಜನತೆಗೆ ಹತ್ತಿರವಾಗುವ ಅಂಶ ಇರಬಹುದು. ಕೃಷಿ ಕಾಯ್ದೆ ವಿವಾದ ಹಾಗೂ ಪಂಚ ರಾಜ್ಯ ಚುನಾವಣೆಗಳ ಹಿನ್ನೆಲೆಯಲ್ಲಿ ರೈತರಿಗೆ ಖುಷಿ ನೀಡಬಹುದು ಎನ್ನಲಾಗಿದೆ.
* ರೈತ ಹೋರಾಟದ ಕಾವು ತಣಿಸುವ ಘೋಷಣೆಗಳ ನಿರೀಕ್ಷೆಯಿದ್ದು ಕಿಸಾನ್ ಸಮ್ಮಾನ್ ಯೋಜನೆ ಮೊತ್ತ ಹೆಚ್ಚಳ ಮಾಡುವ ಸಾಧ್ಯತೆಯಿದೆ.