ಮೊದಲ ದಿನವೇ ಭಾರತೀಯ ಸೈನಿಕರ ಭರ್ಜರಿ ಬೇಟೆ

ಶನಿವಾರ, 23 ಜೂನ್ 2018 (09:25 IST)
ನವದೆಹಲಿ: ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ಮುಂದಾಗಿರುವ ಭಾರತೀಯ ಸೇನೆಗೆ ಮೊದಲ ದಿನವೇ ಭರ್ಜರಿ ಯಶಸ್ಸು ಸಿಕ್ಕಿದೆ.

ಅಮರನಾಥ ಯಾತ್ರೆ ಆರಂಭವಾಗುವ ಹಿನ್ನಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ಭಾರತೀಯ ಸೈನಿಕರು ಮೊದಲ ದಿನ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಜಮ್ಮು ಕಾಶ್ಮೀರದ ಐಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ದಾವೂದ್ ಅಹ್ಮದ್ ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ. ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಂತ್ಯಗೊಂಡ ಮಾರನೇ ದಿನದಿಂದಲೇ ಗಡಿ ಭದ್ರತಾ ಪಡೆಗಳು ಭಾರೀ ಸಿದ್ಧತೆಯೊಂದಿಗೆ ದಾಳಿಗೆ ಮುಂದಾಗಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ