ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ?

ಸೋಮವಾರ, 14 ಮಾರ್ಚ್ 2022 (06:46 IST)
ನವದೆಹಲಿ : ಉಕ್ರೇನ್ನ ಭೀಕರ ಯುದ್ಧದ ಪರಿಸ್ಥಿತಿಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ.

ಉಕ್ರೇನ್ ರಾಜಧಾನಿ ಕೀವ್ ಹಾಗೂ ಇತರ ಹಲವಾರು ಪ್ರಮುಖ ನಗರಗಳ ಮೇಲೆ ರಷ್ಯಾ ಭೀಕರವಾಗಿ ದಾಳಿ ನಡೆಸುತ್ತಿದ್ದು, ಅಲ್ಲಿನ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ.

ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್ನ ಭದ್ರತೆ ಕ್ಷೀಣಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಉಕ್ರೇನ್ನಲ್ಲಿರುವ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್ಗೆ ಸ್ಥಳಾಂತರಿಸಲಾಗುವುದು.

ಉಕ್ರೇನ್ನ ಪರಿಸ್ಥಿತಿ ಸಮತೋಲನಕ್ಕೆ ಬಂದಂತೆ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ