ನಮ್ಮ ದುಡ್ಡಲ್ಲಿ ಪಕ್ಷದ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಊಟ ಕೊಟ್ಟರೆ ಚುನಾವಣೆ ಆಯೋಗಕ್ಕೆ ಏನ್ ಸಮಸ್ಯೆ, ಲೆಕ್ಕ ಕೊಡಲು ನಾವು ಸಿದ್ದರಾಗಿದ್ದೇವೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಚುನಾವಣಾ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ, ಚುನಾವಣಾ ಅಧಿಕಾರಿಗಳು ಚುನಾವಣ ವೆಚ್ಚ ಎಷ್ಟಿರಬೇಕು ಎಂದು ಈಗಾಗಲೇ ಹೇಳಿದ್ದಾರೆ. ಕಾಗಿನೆಲೆಯಲ್ಲಿ 3 ನೇ ತಾರೀಕ್ ಹಿಂದುಳಿದ ವರ್ಗದ ಸಮಾವೇಶ ನಡೆಯಲಿದೆ. 3 ರಿಂದ 5 ಲಕ್ಷ ಮಂದಿ ಸಮಾವೇಶದಲ್ಲಿ ಸೇರಲಿದ್ದಾರೆ