ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ : ನಾಗೇಶ್

ಗುರುವಾರ, 10 ಫೆಬ್ರವರಿ 2022 (11:50 IST)
ಬೆಂಗಳೂರು : ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಹಿಜಬ್ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇದು ಸೂಕ್ಷ್ಮ ವಿಚಾರವಾಗಿದ್ದು, ಉಡುಪಿಯಲ್ಲಿ ಆದ ಘಟನೆ ಇಡೀ ರಾಜ್ಯಕ್ಕೆ ಹರಡುವ ಕೆಲಸ ಆಗುತ್ತಿದೆ.

 ಹೀಗಾಗಿ ಈ ಬಗ್ಗೆ ಗೃಹ, ಶಿಕ್ಷಣ ಇಲಾಖೆ ಸೇರಿ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇದೇ ವೇಳೆ ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಆದರೆ ನಾಳೆ, ನಾಡಿದ್ದು, ಸಿಎಂ ಜೊತೆ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಶೀಘ್ರವೇ ತೀರ್ಪು ಬರುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ