ಮದ್ಯಪಾನ ತಡೆ ನೀತಿ ಜಾರಿಗೆ ತರಲು ಸುಪ್ರೀಂಕೋರ್ಟ್ ಗೆ ಮನವಿ!
ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ವಿಚಾರಣೆಗೆ ನಿರಾಕರಿಸಿದೆ. ವಿನಿಯೋಗ್ ಪರಿವಾರ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಈ ಪ್ರಕರಣ ಆದಾಯದ ಅಂಶದಿಂದ ಕೂಡಿದೆ.
ಕೆಲವು ಸಂದರ್ಭಗಳಲ್ಲಿ ನಾವು ಸೂಚನೆಗಳನ್ನು ನೀಡಿದರೆ ಅದು ರಾಜ್ಯ ಸರ್ಕಾರದ ಆದಾಯವನ್ನು ನಿರ್ಬಂಧಿಸಿದಂತಾಗಲಿದೆ. ಈ ಆದಾಯವನ್ನು ಸರ್ಕಾರಗಳು ಸಾಮಾಜಿಕ ಉದ್ದೇಶಗಳಿಗಾಗಿ ಬಳಸಲಾಗುತ್ತಿವೆ.
ಎಲ್ಲದಕ್ಕಿಂತ ಮುಖ್ಯವಾಗಿ ಈ ಮನವಿಯು ಸರ್ಕಾರ ಹೊಸ ನೀತಿ ಹೊಂದಲು ನಿರ್ದೇಶಿಸುವಂತಿದೆ. ನೀತಿ ರೂಪಿಸಲು ಸೂಚಿಸುವುದು ನಮ್ಮ ವ್ಯಾಪ್ತಿ ಅಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಹೇಳಿದರು.