ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡಕ್ಕೆ ರಾಹುಲ್ ದ್ರಾವಿಡ್

ಬುಧವಾರ, 28 ಮಾರ್ಚ್ 2018 (09:17 IST)
ಬೆಂಗಳೂರು: ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ. ಆದರೆ ಸ್ಪರ್ಧಿಯಾಗಿ ಅಲ್ಲ. ರಾಯಭಾರಿಯಾಗಿ ದ್ರಾವಿಡ್ ರನ್ನು ಚುನಾವಣಾ ಆಯೋಗ ನೇಮಿಸಿದೆ.

ನವದೆಹಲಿಯಲ್ಲಿ ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಒಪಿ ರಾವತ್ ಮಾಹಿತಿ ನೀಡಿದ್ದಾರೆ. ಕರ್ನಾಟಕದವರೇ ಆದ ರಾಹುಲ್ ದ್ರಾವಿಡ್ ಇಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಹೀಗಾಗಿ ಅವರಿಂದ ಮತದಾನದ ಬಗ್ಗೆ ಆಯೋಗ ಪ್ರಚಾರ ನಡೆಸಲಿದೆ.

ಈ ಬಗ್ಗೆ ಹಿಂದೆಯೇ ಮಾಧ್ಯಮಗಳಲ್ಲಿ ವರದಿಗಳು ಬಂದಿತ್ತು. ದ್ರಾವಿಡ್ ರನ್ನು ಚುನಾವಣಾ ರಾಯಭಾರಿಯಾಗಿ ಚುನಾವಣಾ ಆಯೋಗ ನೇಮಿಸುವ ಸಾಧ್ಯತೆಯಿದೆ ಎಂದು ಹಿಂದೆಯೇ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಅದೀಗ ನಿಜವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ