‘ಸರಿಯಾಗಿಯೇ ಹೇಳಿದ್ರಿ’ ಸಚಿವ ನಿತಿನ್ ಗಡ್ಕರಿಗೆ ರಾಹುಲ್ ಗಾಂಧಿ ಶಹಬ್ಬಾಶ್ ಗಿರಿ

ಬುಧವಾರ, 10 ಅಕ್ಟೋಬರ್ 2018 (08:52 IST)
ನವದೆಹಲಿ: ಪ್ರಧಾನಿ ಮೋದಿ ಸರ್ಕಾರ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂತು  ಎಂದು ಸಚಿವ ನಿತಿನ್ ಗಡ್ಕರಿ ರಿಯಾಲಿಟಿ ಶೋ ಕಾರ್ಯಕ್ರಮವೊಂದರಲ್ಲಿ ನೀಡಿದ್ದಾರೆನ್ನಲಾದ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

‘ನೀವು ಸರಿಯಾಗಿಯೇ ಹೇಳಿದ್ದೀರಿ ಗಡ್ಕರಿ ಜೀ’ ಎಂದು ರಾಹುಲ್ ಕೇಂದ್ರ ಸಚಿವರಿಗೆ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ. ಆದರೆ ನಿತಿನ್ ಗಡ್ಕರಿ ತಮ್ಮ ಹೇಳಿಕೆ ಬಗ್ಗೆ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ.

ಆದರೆ ನಾನಾ ಪಾಟೇಕರ್ ಜತೆಗೆ ನಡೆಸಿದ ಸಂದರ್ಶನದ ವಿಡಿಯೋ ಒಂದನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಕೇಂದ್ರ ಸರ್ಕಾರದ ವಿರುದ್ಧ ಲೇವಡಿ ಮಾಡಿದೆ. ನೀವು ಹೇಳಿದ್ದು ಸರಿ. ಜನರೂ ಕೂಡಾ ಇದೇ ರೀತಿ ಸುಳ್ಳು ಭರವಸೆಗಳ ಆಸೆಗೆ ಮೋಸ ಹೋದೆವು ಎಂದು ಈಗ ಪರಿತಪಿಸುತ್ತಿದ್ದಾರೆ ಎಂದು ರಾಹುಲ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ