ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ರಾಹುಲ್ ಗಾಂಧಿ ಪ್ರವಾಸ

ಶುಕ್ರವಾರ, 27 ಏಪ್ರಿಲ್ 2018 (14:11 IST)
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ .
ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದಿಂದ  ಹೆಲಿಕ್ಯಾಪ್ಟರ್ ಮೂಲಕ 9.30ಕ್ಕೆ ಮಂಗಳೂರುನ ಮೇರಿಹಿಲ್ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ.ಬಳಿಕ 9.45ಕ್ಕೆ ಟಿ ಮ್ ಎ ಪೈ ಕಾನ್ವೆಂಷನಲ್ ಸೆಂಟರ್ ನಲ್ಲಿ  ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಲಿದ್ದಾರೆ .
 
ಬಳಿಕ ರಸ್ತೆ ಮಾರ್ಗ ವಾಗಿ ಬಂಟ್ವಾಳ್ ಕ್ಕೆ ತೆರಳಿ 11 ಗಂಟೆಗೆ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ .12.30ಕ್ಕೆ ಅಲ್ಲಿಂದ ಕಾರ್ಯಕ್ರಮ ಮುಗಿಸಿ ಹೆಲಿಕ್ಯಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿ 1 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಮಂಜುನಾಥ್ ಸ್ವಾಮಿ ಯ ದರ್ಶನ ಮಾಡಲಿದ್ದಾರೆ .
 
ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಬಳಿಕ ಕೊಡಗು ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ