ಕರ್ನಾಟಕ ಬಜೆಟ್ ಬಗ್ಗೆ ರಾಹುಲ್ ಗಾಂಧಿ ನಿರೀಕ್ಷೆ ಇದುವೇ ಅಂತೆ!

ಗುರುವಾರ, 5 ಜುಲೈ 2018 (08:53 IST)
ನವದೆಹಲಿ: ಕರ್ನಾಟಕದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಗೆ ಮೊದಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ತಮ್ಮ ನಿರೀಕ್ಷೆಗಳ ಪಟ್ಟಿ ಹೊರಹಾಕಿದ್ದಾರೆ.

ಇಂದು ಸಿಎಂ ಕುಮಾರಸ್ವಾಮಿ ವಿಧಾನಸಭೆಯಲ್ಲಿ ತಮ್ಮ ಸರ್ಕಾರದ ಮೊದಲ ಬಜೆಟ್ ಮಂಡಿಸಲಿದ್ದಾರೆ. ಈ ನಿಟ್ಟಿನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರ ತನ್ನ ಭರವಸೆಗಳಿಗೆ ಬದ್ಧವಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಬಜೆಟ್ ರೈತರ ಸಾಲಮನ್ನಾ  ಮಾಡುವ ಮಾತು ಉಳಿಸಿಕೊಳ್ಳುತ್ತದೆ ಎಂದು ನಂಬಿದ್ದೇನೆ. ಈ ಮೂಲಕ ಕರ್ನಾಟಕ ಸರ್ಕಾರ ದೇಶದ ಎಲ್ಲಾ ರೈತರಿಗೆ ಭರವಸೆಯ ಆಶಾಕಿರಣವಾಗುತ್ತದೆ ಎಂದು ನಂಬಿದ್ದೇನೆ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ