ಕೇರಳದಲ್ಲಿ ಶಬರಿಮಲೆ ಪ್ರತಿಭಟನೆ ತೀವ್ರ
ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮನೆತನವಾದ ಪಂತಳ ರಾಜಮನೆತನ ಮತ್ತು ಪುರೋಹಿತರ ವರ್ಗ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದು, ಹಲವು ವರ್ಷಗಳಿಂದ ನಡೆದುಬಂದ ಸಂಪ್ರದಾಯವನ್ನು ಮುರಿಯುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಈ ವರ್ಗ ಇದೀಗ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ. ಈ ನಡುವೆ ಇಕ್ಕಟ್ಟಿಗೆ ಸಿಲುಕಿರುವ ಕೇರಳ ಸರ್ಕಾರ ತಂತ್ರಿಗಳು ಮತ್ತು ಪಂತಳ ರಾಜಮನೆತನದವರ ಜತೆ ಮಾತುಕತೆಗೆ ಮುಂದಾಗಿದೆ. ಇದು ದೇವಾಲಯದ ಸಂಪ್ರದಾಯಕ್ಕೆ ವಿರೋಧ. ಸರ್ಕಾರ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.