ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸೋಲಲು ಈ ಕಾರಣಗಳು ಸಾಕಂತೆ!

ಬುಧವಾರ, 25 ಏಪ್ರಿಲ್ 2018 (08:07 IST)
ಬಾಗಲಕೋಟೆ: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಾದಾಮಿಯಿಂದ ಎರಡನೇ ಕ್ಷೇತ್ರವಾಗಿ ನಾಮಪತ್ರ ಸಲ್ಲಿಸಿರುವ ಸಿಎಂ ಸಿದ್ದರಾಮಯ್ಯ ಸೋಲಲು ಬಿಜೆಪಿ ನಾಯಕ ಸದಾನಂದ ಗೌಡ ಕಾರಣ ಕೊಟ್ಟಿದ್ದಾರೆ.

ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ ಶ್ರೀರಾಮುಲು ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸಿದ್ಧ ಎಂದು ಹೇಳಿರುವ ಸದಾನಂದ ಗೌಡ ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ.

‘ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ತಳಮಟ್ಟದಲ್ಲೇ ಪ್ರಬಲವಾಗಿದೆ. ಇಲ್ಲಿನ 5 ಗ್ರಾಮ ಪಂಚಾಯತ್ ಗಳ ಪೈಕಿ 4 ಸ್ಥಾನಗಳು ಬಿಜೆಪಿ ಹಿಡಿತದಲ್ಲಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಸೋಲುಣಿಸುವುದು ಬಿಜೆಪಿಗೆ ಕಷ್ಟವಾಗದು ಎಂದು ಸದಾನಂದ ಗೌಡ ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ