ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದರೆ ಸಾಮೂಹಿಕ ಆತ್ಮಹತ್ಯೆ ಬೆದರಿಕೆ!
ಅಕ್ಟೋಬರ್ 17 ರಂದು ನಮ್ಮ ಮಹಿಳಾ ಕಾರ್ಯಕರ್ತರು ಪಂಪಾ ನದಿ ಬಳಿ ಸೇರಲಿದ್ದು, ಮಹಿಳೆಯರು ದೇವಾಲಯ ಪ್ರವೇಶಿಸಲು ಪ್ರಯತ್ನಿಸಿದರೆ ಸಾಮೂಹಿಕ ಆತ್ಮಹತ್ಯೆ ಮಾಡಲಿದ್ದಾರೆ ಎಂದು ಕೇರಳದ ಶಿವಸೇನೆ ಘಟಕ ಬೆದರಿಕೆ ಹಾಕಿದೆ.
ಕೇರಳ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ತೀರ್ಪು ಪಾಲಿಸುವುದಾಗಿ ಹೇಳಿದೆ. ಆದರೆ ಪಂತಳ ರಾಜಮನೆತನ ಸೇರಿದಂತೆ, ಕೆಲವು ಸಂಘಟನೆಗಳು ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.