ಬಾಯ್ತಪ್ಪಿ ಆಡಿದ ಮಾತಿಗೆ ಅಸಮಾಧಾನ ಎದ್ದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಭಾನುವಾರ, 26 ಆಗಸ್ಟ್ 2018 (09:11 IST)
ಬೆಂಗಳೂರು: ಮುಂದಿನ ಸಿಎಂ ನಾನೇ ಎಂದು ಹೇಳಿಕೆ ನೀಡಿ ಮೈತ್ರಿ ಪಕ್ಷ ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಉಂಟಾಗಿತ್ತು. ಹೀಗಾಗಿ ಮೈತ್ರಿ ಧರ್ಮ ಪಾಲಿಸುವಂತೆ ಸಿದ್ದರಾಮಯ್ಯಗೆ ಹಿರಿಯ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ.

ಇದರ ಬೆನ್ನಲ್ಲೇ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, ನಾನು ಮುಂದಿನ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ನಾನೇ ಸಿಎಂ ಆಗುವೆ ಎಂದಿದ್ದೆ ಎಂದಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಸಿಎಂ ಎಚ್ ಡಿಕೆ ಮತ್ತು ಸಿದ್ದು ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎನ್ನುವ ವಿಚಾರಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ