ವಿದೇಶದಿಂದಲೇ ರಾಜ್ಯ ರಾಜಕೀಯದ ಬಗ್ಗೆ ತಿಳಿದುಕೊಳ್ಳುತ್ತಿರುವ ಸಿದ್ದರಾಮಯ್ಯ

Webdunia
ಬುಧವಾರ, 12 ಸೆಪ್ಟಂಬರ್ 2018 (09:34 IST)
ಬೆಂಗಳೂರು: ಯುರೋಪ್ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿದ್ದುಕೊಂಡೇ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ತಿಳಿದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಕಾಂಗ್ರೆಸ್ ನಲ್ಲಿ ಉಂಟಾದ ಭಿನ್ನಮತ ಶಮನ ಮಾಡುವ ಜವಾಬ್ಧಾರಿಯನ್ನು ಸಿದ್ದರಾಮಯ್ಯ ಹೆಗಲಿಗೇರಿಸಲಾಗಿತ್ತು. ಆದರೆ ವಿದೇಶದಿಂದ ಬಂದ ಬಳಿಕ ಈ ಬಗ್ಗೆ ಮಾತನಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಆದರೆ ಸಿದ್ದರಾಮಯ್ಯ ವಿದೇಶದಲ್ಲಿರುವಾಗಲೇ ಜಾರಕಿಹೊಳಿ ಸಹೋದರರ ಬಂಡಾಯ ಮತ್ತು ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯಲು ಯತ್ನ ನಡೆಸುತ್ತಿದ್ದು, ಈ ಎಲ್ಲಾ ಹಿನ್ನಲೆಯಲ್ಲಿ ಜಾರಕಿಹೊಳಿ ಸಹೋದರರೊಂದಿಗೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿದ್ದಾರೆ ಎನ್ನಲಾಗಿದೆ. ತಾವು ಸ್ವದೇಶಕ್ಕೆ ಬಂದ ಬಳಿಕ ಈ ಬಗ್ಗೆ ಮಾತುಕತೆ ನಡೆಸೋಣ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯುವಂತೆ ಜಾರಕಿಹೊಳಿ ಸಹೋದರರಿಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

Next Article