ಬಜೆಟ್ ಬಗ್ಗೆ ಬೆಣ್ಣೆಯಲ್ಲಿ ಕೂದಲು ತೆಗೆದಂತೆ ಮಾತನಾಡಿದ ಸಿದ್ದರಾಮಯ್ಯ!

ಶುಕ್ರವಾರ, 6 ಜುಲೈ 2018 (09:12 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ನಿನ್ನೆ ಸದನದಲ್ಲಿ ಮಂಡಿಸಿದರು. ಈ ಬಗ್ಗೆ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಜಾಣತನದಿಂದಲೇ ಉತ್ತರಿಸಿದ್ದಾರೆ.
 

ಬಜೆಟ್ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ವಿವಾದಕ್ಕೆ ಆಸ್ಪದವಿಲ್ಲದಂತೆ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲ, ತಮ್ಮ ಸರ್ಕಾರವಿದ್ದಾಗ ಮಾಡಿದ್ದ ಯೋಜನೆಗಳನ್ನು ಮುಂದುವರಿಸಿದ್ದಾರೆ ಎಂದೂ ಹೇಳಿದ್ದಾರೆ.

‘ಇದು ಸಮ್ಮಿಶ್ರ ಸರ್ಕಾರದ ಬಜೆಟ್. ಹಿಂದಿನ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರಿಸಿ ಮುಖ್ಯಮಂತ್ರಿಗಳು ಪರಿಷ್ಕೃತ ಬಜೆಟ್ ನಲ್ಲಿ ಮಂಡಿಸಿದ್ದಾರೆ. ಇದರಲ್ಲಿ ವಿಶೇಷವಾಗಿ ರೈತರ ಸಾಲಮನ್ನಾ ಮಾಡಿರುವುದು ಸ್ವಾಗತಾರ್ಹ. ಇದಕ್ಕೆ ಸಮನ್ವಯ ಸಮಿತಿ ಒಪ್ಪಿಗೆ ಇದೆ’ ಎಂದು ಸಿದ್ದರಾಮಯ್ಯ ಜಾಗರೂಕತೆಯಿಂದ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ