ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ ಶ್ರೀರಾಮುಲು

ಭಾನುವಾರ, 20 ಮೇ 2018 (12:55 IST)
ಬಳ್ಳಾರಿ: 'ತಪ್ಪಿಸಿಕೊಂಡಿದ್ದೇವೆ ಎಂದು ತಿಳಿಯಬೇಡಿ , ಪ್ರಬಲ ವಿರೋಧ ಪಕ್ಷವಾಗಿ ನಿಮ್ಮನ್ನು ಮಲಗಲು ಬಿಡುವುದಿಲ್ಲ' ಎಂದು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರದ ವಿರುದ್ಧ ಶಾಸಕ ಶ್ರೀರಾಮುಲು ಕಿಡಿಕಾರಿದ್ದಾರೆ.


'ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ಜೈಲು ಪಾಲಾಗುವ ಭೀತಿ ಎದುರಾಗಿತ್ತು. ಹೀಗಾಗಿ 78 ಸ್ಥಾನಗಳನ್ನು ಗೆದ್ದರೂ ಜೆಡಿಎಸ್‌ಗೆ ಬೆಂಬಲ ನೀಡಿ ಸರ್ಕಾರ ರಚನೆಗೆ ಮುಂದಾಗಿದೆ. ಸರ್ಕಾರದ ಅವಧಿಯಲ್ಲಿ ಮಾಡಿದ ಅಕ್ರಮಗಳನ್ನು  ಮುಚ್ಚಿ  ಹಾಕಲು ಮುಂದಾಗಿದೆ. ನಾವು ಬಿಡುವುದಿಲ್ಲ. 'ಲೋಕಾಯುಕ್ತವನ್ನು ಮುಚ್ಚಿ ಹಾಕಿ ಎಸಿಬಿ ರಚನೆ ಮಾಡಿ ಭ್ರಷ್ಟಾಚಾರಿಗಳಿಗೆ ಪ್ರಾಮಾಣಿಕರು ಎಂದು ಕ್ಲೀನ್‌ ಚಿಟ್‌ ನೀಡುವ ಕೆಲಸ ಮಾಡಿದ್ದಾರೆ. ಯಾವೆಲ್ಲಾ ಅಕ್ರಮಗಳನ್ನು ಮಾಡಿದ್ದಾರೋ ಅವುಗಳನ್ನು ಬಯಲು ಮಾಡುತ್ತೇವೆ' ಎಂದು ಗುಡುಗಿದ್ದಾರೆ. 



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ