ಅಯ್ಯಪ್ಪಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ?

ಶನಿವಾರ, 11 ಡಿಸೆಂಬರ್ 2021 (10:01 IST)
ವರ್ಷಾಂತ್ಯದ ವೇಳೆ ಅಯ್ಯಪ್ಪಸ್ವಾಮಿ ಭಕ್ತರು ಮಾಲೆ ಧರಿಸಿ ಶಬರಿಮಲೆಗೆ ಹೋಗುತ್ತಾರೆ. ಅಲ್ಲಿ ಭಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಾರೆ.

ಆದರೆ ಕೊರೊನಾ ಕಾರಣದಿಂದ ಕಳೆದ ಬಾರಿ ಅಯ್ಯಪ್ಪಸ್ವಾಮಿ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು. ಸದ್ಯ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರಿಂದ ದೇಗುಲಕ್ಕೆ ತೆರಳಲು ಮತ್ತೆ ಅವಕಾಶ ಸಿಕ್ಕಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆ ಅಯ್ಯಪ್ಪಸ್ವಾಮಿ ಸನ್ನಿಧಿಗೆ ತೆರಳುವುದಕ್ಕೆ ಮಾರ್ಗ ಓಪನ್ ಆಗಿದೆ.

ಪಂಪಾದಿಂದ ನೀಲಿಮಲ ಮಾರ್ಗದಲ್ಲಿ ತೆರಳಲು ಅವಕಾಶ ನೀಡಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಮಾರ್ಗ ಮಧ್ಯೆ ಆರೋಗ್ಯ ತಪಾಸಣೆಗೆ ಕೇಂದ್ರಗಳನ್ನ ತೆರೆಯಲಾಗಿದೆ ಅಂತ ಕೇರಳ ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ