ಪರೀಕ್ಷೆಗಳು ಮುಂದೂಡಿಕೆ : ಅಶ್ವಥ್ ನಾರಾಯಣ

ಗುರುವಾರ, 17 ಫೆಬ್ರವರಿ 2022 (07:30 IST)
ಬೆಂಗಳೂರು : ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ  ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೂಚನೆ ನೀಡಿದ್ದಾರೆ.

ಕೊರೊನಾ 3ನೇ ಅಲೆ ಮತ್ತು ಅತಿಥಿ ಉಪನ್ಯಾಸಕರ ಮುಷ್ಕರ ಹಿನ್ನಲೆಯಲ್ಲಿ ಸಿಲಬಸ್ ಮುಕ್ತಾಯ ಆಗಿರಲಿಲ್ಲ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿವಿಗಳಿಗೆ ಸೆಮಿಸ್ಟರ್ ಪರೀಕ್ಷೆ  ಮುಂದೂಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. 

ಕೆಲವು ವಿವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳೆಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ ಮೇಲೆ ಹೇಳಿದ ಕಾರಣಗಳಿಂದ  ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ