ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಅಷ್ಟೆ ಅವಕಾಶ!

ಶನಿವಾರ, 15 ಜನವರಿ 2022 (16:37 IST)
ಬೆಂಗಳೂರು : ತುರ್ತು ಚಿಕಿತ್ಸೆ ಅಗತ್ಯವಿರುವವರು ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗಳಿಗೆ ಭೇಟಿ ನೀಡದಂತೆ ಸರ್ಕಾರ ಸೂಚನೆ ನೀಡಿದೆ.
 
ಹೊರರೋಗಿಗಳು, ತಪಾಸಣೆಗಾಗಿ ಆಸ್ಪತ್ರೆಗೆ ಹೋಗುವವರು, ದಂತ ಚಿಕಿತ್ಸೆ ಪಡೆಯುವವರು ಸೇರಿದಂತೆ ಇನ್ನಿತರ ರೋಗಿಗಳು ಎರಡು ವಾರಗಳ ಕಾಲ ಆಸ್ಪತ್ರೆಗಳಿಗೆ ಭೇಟಿ ನೀಡದಂತೆ ಸರ್ಕಾರ ತಿಳಿಸಿದೆ.

ಆಸ್ಪತ್ರೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಸಲುವಾಗಿ ಈ ಆದೇಶ ಹೊರಡಿಸಲಾಗಿದೆ. ಕೋವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಎಚ್ಚರಿಕೆಯ ಸೂಚನೆ ರವಾನೆಯಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ