ಸಿಎಂ ಪರ ಪ್ರಚಾರ ಮಾಡದಂತೆ ದರ್ಶನ್ ವಿರುದ್ಧ ಪ್ರತಿಭಟನೆ ಮಾಡಿದ ಜೆಡಿಎಸ್ ಕಾಯಕರ್ತರು

ಸೋಮವಾರ, 7 ಮೇ 2018 (06:55 IST)
ಬೆಂಗಳೂರು : ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಸಿಎಂ ಸಿದ್ದಾರಾಮಯ್ಯ ಅವರ ಪರವಾಗಿ ಪ್ರಚಾರಕ್ಕೆ ನಟ ಸುದೀಪ್ ಅವರು ಆಗಮಿಸುವ ವಿಷಯ ತಿಳಿಯುತ್ತಲೇ ಅದಕ್ಕೆ  ವಿರೋಧ ವ್ಯಕ್ತವಾಗಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ  ಇದೀಗ ನಟ ದರ್ಶನ್ ಅವರು ಕೂಡ ಸಿಎಂ ಪರ ಪ್ರಚಾರದಲ್ಲಿ ತೊಡಗಿದ್ದಾಗ ಅದನ್ನು ವಿರೋಧಿಸಿ ಸ್ಥಳದಲ್ಲೆ ಅನೇಕರು  ಪ್ರತಿಭಟನೆ ನಡೆಸಿದ್ದಾರೆ.

ಹೌದು. ನಟ ದರ್ಶನ್ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರದಂದು ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದರು. ಆಗ ನಾಗನಹಳ್ಳಿಯಲ್ಲಿ ಜೆಡಿಎಸ್ ಕಾಯಕರ್ತರು ದರ್ಶನ್ ಅವರು ಪ್ರಚಾರ ಮಾಡದಂತೆ ವಿರೋಧಿಸಿ ಅಂಬರೀಷ್ ಅವರ ಸಚಿವ ಸ್ಥಾನ ಕಿತ್ತುಕೊಂಡಾಗ ಯಾಕೆ ಮಾತನಾಡಲಿಲ್ಲ, ಕಾವೇರಿ ಪರ ಹೋರಾಟ ಯಾಕೆ ಮಾಡಲಿಲ್ಲ ಎಂದು  ಪ್ರಶ್ನಿಸಿದ್ದಾರೆ. ಅಲ್ಲದೇ ದರ್ಶನ್ ಹಾಗೂ ಸಿದ್ದರಾಮಯ್ಯಗೆ ಧಿಕ್ಕಾರ ಕೂಗಿದ್ದಾರೆ.


 

ಇಷ್ಟೆಲ್ಲಾ ನಡೆದರೂ ಕೂಡ ದರ್ಶನ್ ಅವರು ಪ್ರಚಾರ ಕಾರ್ಯವನ್ನು ಮುಂದುವರಿಸಿದ್ದು, ಇದರಿಂದ ಪ್ರತಿಭಟನೆಯ ಕಾವು ಇನ್ನಷ್ಟು ಹೆಚ್ಚಾದ್ದರಿಂದ ಸಿದ್ದರಾಮಯ್ಯ ಪರ ಪ್ರಚಾರ ಕಣದಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಥಳ ಬದಲಾಯಿಸಿದ್ದಾರೆ. ಇನ್ನು ಈ ವೇಳೆ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ