ನಾಳೆ ಬಂದ್ ಇಲ್ಲ : ಸಿಎಂ

ಗುರುವಾರ, 30 ಡಿಸೆಂಬರ್ 2021 (14:57 IST)
ಬೆಂಗಳೂರು : ಕನ್ನಡದ ರಕ್ಷಣೆಗೆ ಸರ್ಕಾರ ಯಾವತ್ತು ಬದ್ಧವಾಗಿದೆ. ಕನ್ನಡ ಸಂಘಟನೆ ನಾಳೆ ಕರೆ ಕೊಟ್ಟಿರುವ ಬಂದ್ನ್ನು ವಾಪಸ್ ತೆಗೆದುಕೊಂಡಿದೆ.

ನಾಳೆ ಬಂದ್ ಇಲ್ಲ. ಎಲ್ಲರೂ ಕೂಡ ಎಂದಿನಂತೆ ವ್ಯಾಪಾರ ವ್ಯವಹಾರಗಳನ್ನು ನಡೆಸಬಹುದು ಎಂದಿದ್ದಾರೆ.

ಕನ್ನಡ ಸಂಘಟನೆಯ ಮುಖಂಡರೊಂದಿಗೆ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಹಿರಿಯ ಕಟ್ಟಾಳು ವಾಟಾಳ್ ನಾಗರಾಜ್ ಬಂದ್ಗೆ ಕರೆ ಕೊಟ್ಟಿದ್ರು. ಮೊನ್ನೆ ಸಹ ನಾನು ವಾಟಾಳ್ ಜೊತೆ ಮಾತನಾಡಿದ್ದೆ.

ಇಂದು ನನ್ನ ಮನವಿಗೆ ಗೌರವ ಕೊಟ್ಟು ಬಂದ್ ಹಿಂಪಡೆದಿದ್ದಾರೆ. ನಾಳೆ ಬಂದ್ ಇರುವುದಿಲ್ಲ ವ್ಯಾಪಾರ ವ್ಯವಹಾರಗಳಿಗೆ ಯಾವುದೇ ತೊಡಕಾಗುವುದಿಲ್ಲ. ಕನ್ನಡಿಗರ ಗಡಿ, ಕನ್ನಡಿಗರ ರಕ್ಷಣೆಗೆ ನಾವು ಯಾವತ್ತು ಸಿದ್ಧ. ಎಂಇಎಸ್ ಬಗ್ಗೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತೇವೆ ಬಂದ್ ವಾಪಸ್ ಪಡೆದ ಎಲ್ಲರಿಗೂ ಧನ್ಯವಾದಗಳು ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ