ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ವಿರುಪಾಕ್ಷಪ್ಪ

ಸೋಮವಾರ, 2 ಏಪ್ರಿಲ್ 2018 (16:44 IST)
ಹುಬ್ಬಳ್ಳಿ: ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಜೀವಂತವಾಗಿರುತ್ತದೆ. ಅದು ಸದಾ ಚಟುವಟಿಕೆಗಳಿಂದ ಕೂಡಿರುತ್ತದೆ.ಸಂಗೊಳ್ಳಿ ರಾಯಣ್ಣ ಬ್ರಿಗೇಡಗೂ, ಬಿಜೆಪಿ ಪಕ್ಷಕ್ಕೂ ಸಂಬಂದವಿಲ್ಲ ಎಂದು ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಹೇಳಿದ್ದಾರೆ. 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚುನಾವಣಾ ನಂತರ ಸಕ್ರಿಯ ಸಂಘಟನೆಯಲ್ಲಿ ತೊಡಗುತ್ತದೆ. ಬ್ರೀಗೇಡ್‌ದಿಂದ ಬಿಜೆಪಿಯ ಯಾವ ಕಾರ್ಯಕರ್ತರು ಅತಂತ್ರಗೊಂಡಿಲ್ಲ. ಬಿಜೆಪಿಗೂ ಬ್ರಿಗೇಡ್‌ಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 
ಹಾವೇರಿ ಜಿಲ್ಲೆಯ ಬ್ಯಾಡಗಿಯ ಕಾಗೆನೆಲೆಯಲ್ಲಿ ನಾಳೆ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಅಮಿತಾ ಶಾ ಆಗಮಿಸಲಿದ್ದು ನಾಳಿನ ಸಮಾವೇಶವನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ.
 
ಹುಬ್ಬಳ್ಳಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ.ನಾನು ಸಹ ಸಿಂಧನೂರು ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮುಖಂಡ, ಮಾಜಿ ಸಂಸದ ಕೆ ವಿರೂಪಾಕ್ಷಪ್ಪ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ