ಪ್ರಾಥಮಿಕ-ಪ್ರೌಢಶಿಕ್ಷಣದಲ್ಲೂ `ರಾಷ್ಟ್ರೀಯ ಶಿಕ್ಷಣ ನೀತಿ' ಜಾರಿಗೆ ಚಿಂತನೆ : ಬಿ.ಸಿ.ನಾಗೇಶ್

ಭಾನುವಾರ, 3 ಅಕ್ಟೋಬರ್ 2021 (12:00 IST)
ಮೈಸೂರು : ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಮುಂದಿನ ವರ್ಷದಿಂದಲೇ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಕುರಿತು ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ್ ಅವರ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ 1 ರಿಂದ ದ್ವಿತೀಯ ಪಿಯುಸಿ ವರೆಗೆ ನಾಲ್ಕು ಹಂತಗಳ ಶಿಕ್ಷಣ ಪಠ್ಯಕ್ರಮ ರೂಪಿಸಲಾಗುವುದು ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ