ಭಾರತ್ ಬಂದ್ ದಿನ ಕಚೇರಿಗೆ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ತ್ರಿಪುರಾ ಸರ್ಕಾರ

ಭಾನುವಾರ, 16 ಸೆಪ್ಟಂಬರ್ 2018 (08:42 IST)
ನವದೆಹಲಿ: ಕಾಂಗ್ರೆಸ್ ನೇತೃತ್ವದಲ್ಲಿ ಸೆಪ್ಟೆಂಬರ್ 10 ರಂದು ದೇಶದಾದ್ಯಂತ ತೈಲ ಬೆಲೆ ಏರಿಕೆ ವಿರೋಧಿಸಿ ನಡೆದ ಭಾರತ್ ಬಂದ್ ದಿನ ಕಚೇರಿಗೆ ಬಾರದೇ ಇದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ತ್ರಿಪುರಾ ಸರ್ಕಾರ ನಿರ್ಧರಿಸಿದೆ.

ಬಿಜೆಪಿ ನೇತೃತ್ವದ ತ್ರಿಪುರಾ ಸರ್ಕಾರ ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಆ ದಿನ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದೆ.

ಮೊದಲು ಇಲಾಖೆಗಳಿಗೆ ಆ ದಿನ ಗೈರು ಹಾಜರಾದ ಅಧಿಕಾರಿಗಳ ಪಟ್ಟಿ ಕೇಳಿದ್ದ ಸರ್ಕಾರ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎರಡನೇ ನೋಟಿಸ್ ಜಾರಿ ಮಾಡಿತ್ತು. ಈ ವಿಚಾರ ಇದೀಗ ವ್ಯಾಪಕ ಚರ್ಚೆಗೆ ಗುರಿಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ