ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಿವಸೇನೆಯ ಮುಖ್ಯಸ್ಥ ಉದ್ದವ್ ಠಾಕ್ರೆ

ಸೋಮವಾರ, 23 ಜುಲೈ 2018 (11:36 IST)
ಮುಂಬೈ : ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ಮಹಿಳೆಯರ ರಕ್ಷಣೆ ಮಾಡದಿದ್ದರೂ ಗೋವುಗಳ ರಕ್ಷಣೆ ಮಾಡುತ್ತಿದ್ದಾರೆ ಎಂದು ಶಿವಸೇನೆ ಪಕ್ಷದ ಮುಖ್ಯಸ್ಥ ಉದ್ದವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡುವಾಗ  ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು,’ ನಾನು ಮೂರು ವರ್ಷಗಳಿಂದ ಬಿಜೆಪಿ ಹಿಂದುತ್ವವನ್ನು ಒಪ್ಪುತ್ತಿಲ್ಲ. ಅವರ ಹಿಂದುತ್ವದ ಸಿದ್ಧಾಂತಕ್ಕಿಂತ ನಮ್ಮದು ಭಿನ್ನವಾಗಿದೆ. ನಿಮ್ಮ ಸಿದ್ಧಾಂತ ನಮ್ಮ ಸಿದ್ಧಾಂತವಲ್ಲ’ ಎಂದು ಹೇಳಿದ್ದಾರೆ.


ಹಾಗೇ ‘ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲದಂತಾಗಿದೆ. ಆದರೆ ನೀವು ಗೋವನ್ನು ರಕ್ಷಿಸುತ್ತಿದ್ದೀರಿ. ಜನರ ಆಹಾರ ಹಕ್ಕಿನ ಮೇಲೆ ದಾಳಿ ನಡೆಸುತ್ತಿದ್ದೀರಿ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ