4ನೇ ಅಲೆ ಆರಂಭದ ಬಗ್ಗೆ ಎಚ್ಚರಿಕೆ!

ಮಂಗಳವಾರ, 26 ಏಪ್ರಿಲ್ 2022 (19:53 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಕೋವಿಡ್ 4ನೇ ಅಲೆ ಆರಂಭವಾಗಿದ್ದು,

ಮುಂದಿನ 4-5 ವಾರಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಲಿವೆ ಎಂದು ಕೋವಿಡ್ ಟಾಸ್ಕ್ಫೋರ್ಸ್ ಸಮಿತಿ ಸದಸ್ಯ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭಾರತಕ್ಕೆ ಈಗಾಗಲೇ ಕೊರೊನಾ 4ನೇ ಅಲೆ ಬಂದಿದ್ದು, ದೆಹಲಿ, ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ನಮ್ಮ ರಾಜ್ಯಕ್ಕೂ ಕೋವಿಡ್ 4ನೇ ಅಲೆ ಕಾಲಿಟ್ಟಿದೆ. ಮುಂದಿನ 4-5 ವಾರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಎಚ್ಚರಿಸಿದ್ದಾರೆ. 

ಕೋವಿಡ್ 2, 3ನೇ ಅಲೆಯಲ್ಲಿ ಯಾವ ರೀತಿ ಕೊರೊನಾ ರೋಗಲಕ್ಷಣಗಳಿರುತ್ತೋ 4ನೇ ಅಲೆಯಲ್ಲೂ ಅದೇ ರೀತಿ ಇರಲಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಕಡಿಮೆಯಿರಲಿದೆ.

ಆದರೆ ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆ ಪೀಡಿತರು, ಕ್ಯಾನ್ಸರ್ ರೊಗಿಗಳು, ನಿಶ್ಯಕ್ತಿಯುಳ್ಳವರು, ಡಯಾಲಿಸಿಸ್ ಚಿಕಿತ್ಸೆಗೆ ಒಳಗಾದವರು, ಅಸ್ತಮಾ ರೋಗಿಗಳು ಹಾಗೂ ಇತರೇ ಕಾಯಿಲೆ ಇರುವವರು ಎಚ್ಚರವಾಗಿರಬೇಕು ಎಂದು ಸಲಹೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ