ಹೆದ್ದಾರಿಗೆ ನುಗ್ಗಿದ ನೀರು : ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್
ಅಮಾನಿಕೆರೆ ಹಾಗೂ ಬಿನ್ನಮಂಗಲದ ಕೆರೆಗಳು ಕೋಡಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಕೆರೆಯ ನೀರು ನುಗ್ಗಿದ್ದು, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ.
ಅಲ್ಲದೇ ನೂರಾರು ವಾಹನಗಳು ಮಳೆಯ ನೀರಿನಲ್ಲಿ ಮುಳುಗಡೆಯಾಗಿದೆ. ಇದೀಗ ನೆಲಮಂಗಲ ಬೆಂಗಳೂರು ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಮತ್ತೊಂದೆಡೆ ಅಡಕಮಾರನಹಳ್ಳಿಯ ಜೈನ್ ಟೆಂಪಲ್ ಕೂಡ ನಾಲ್ಕೈದು ಅಡಿ ನೀರಿನಿಂದ ಜಲಾವೃತವಾಗಿದೆ.