ನೇಪಾಳದಲ್ಲಿ ಮಳೆ: ಸಂಕಷ್ಟಕ್ಕೆ ಸಿಲುಕಿದ 290 ಕರ್ನಾಟಕದ ಯಾತ್ರಾರ್ಥಿಗಳು
ನೇಪಾಳದ ಸಿಮಿಕೋಟ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಸಿಎಂ ಕುಮಾರಸ್ವಾಮಿ ದೆಹಲಿಯ ಕರ್ನಾಟಕ ಭವನದ ಸ್ಥಾನಿಕ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ನೇಪಾಳ ಸೇನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಯಾತ್ರಾರ್ಥಿಗಳಿಗೆ ನೆರವು ನೀಡುತ್ತಿದ್ದಾರೆ. ಯಾತ್ರೆ ಕೈಗೊಂಡವರಲ್ಲಿ ಹೆಚ್ಚಿನವರು ಮೈಸೂರು, ಮಂಡ್ಯ ಭಾಗದವರಾಗಿದ್ದಾರೆ. ಸಂತ್ರಸ್ತರ ಬಗ್ಗೆ ಕುಟುಂಬಸ್ಥರಿಗೆ ದೆಹಲಿಯ ರಾಯಭಾರ ಕಚೇರಿಯೂ ಸಹಾಯ ಮಾಡುತ್ತಿದೆ. ಕಳೆದ ನಾಲ್ಕು ದಿನಗಳಿಂದ ಪ್ರತಿಕೂಲ ಹವಾಮಾನದಿಂದಾಗಿ ಯಾತ್ರಾರ್ಥಿಗಳು ನೀರು, ಆಹಾರವಿಲ್ಲದೇ ಪರದಾಡುತ್ತಿದ್ದಾರೆ.